ಸುಳ್ಯ ತಾ. ಅಜ್ಜಾವರ ಗ್ರಾಮದ ದೊಡ್ಡೇರಿಯಲ್ಲಿ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದು

ಇಂದು ( ಫೆ.22) ರಂದು ಮಂಗಳೂರು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಮತ್ತು ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ರವರು ಭೇಟಿ ನೀಡಿದರು.

ದೇವಸ್ಥಾನದ ಸಮಿತಿಯ ಸದಸ್ಯರು ಈ ಸಂದರ್ಭ ಸಂಸದರಿಗೆ, ಶಾಸಕರಿಗೆ ಶಾಲು ಹಾಕಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಾಜಿ ಗ್ರಾ. ಪಂ ಅಧ್ಯಕ್ಷೆ ಸತ್ಯವತಿ ಬಸವನಪಾದೆ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.













































