ಸುಳ್ಯ : ದೊಡ್ಡೇರಿ ಮಹಾಮಾಯಿ ದೇವಸ್ಥಾನಕ್ಕೆ ಸಂಸದ ಕ್ಯಾ. ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಭೇಟಿ

Picture of Savistara

Savistara

Bureau Report

ಸುಳ್ಯ ತಾ. ಅಜ್ಜಾವರ ಗ್ರಾಮದ ದೊಡ್ಡೇರಿಯಲ್ಲಿ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದು

ಇಂದು ( ಫೆ.22) ರಂದು ಮಂಗಳೂರು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಮತ್ತು ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ರವರು ಭೇಟಿ ನೀಡಿದರು.

ದೇವಸ್ಥಾನದ ಸಮಿತಿಯ ಸದಸ್ಯರು ಈ ಸಂದರ್ಭ ಸಂಸದರಿಗೆ, ಶಾಸಕರಿಗೆ ಶಾಲು ಹಾಕಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಾಜಿ ಗ್ರಾ. ಪಂ ಅಧ್ಯಕ್ಷೆ ಸತ್ಯವತಿ ಬಸವನಪಾದೆ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

[t4b-ticker]
error: Content is protected !!