ಮೊಬೈಲ್ ಕ್ಯಾಂಟೀನ್ ತೆರೆಯಲು ₹5 ಲಕ್ಷ ಸಹಾಯಧನ: SC/ST ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

Picture of Savistara

Savistara

Bureau Report

ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿನ ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಸ್ವಂತ ಉದ್ಯೋಗ ಮಾಡಬಯಸುವ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಘಟಕ ಸ್ಥಾಪಿಸಲು ಬರೋಬ್ಬರಿ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡಲಾಗುತ್ತಿದೆ.

ಏನಿದು ಯೋಜನೆ?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಲ್ಲಿ ಉದ್ಯಮಶೀಲತೆ (Entrepreneurship) ಬೆಳೆಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲು ಒಂದು ತಿಂಗಳ ಕಾಲ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿ ಪ್ರಮಾಣಪತ್ರ ಪಡೆಯುವವರಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಘಟಕ ವೆಚ್ಚದ ಶೇ. 70 ರಷ್ಟು (ಗರಿಷ್ಠ ರೂ. 5 ಲಕ್ಷ) ಸಹಾಯಧನ ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳೇನು?

ಶಿಕ್ಷಣ: ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು 20 ರಿಂದ 55 ವರ್ಷದೊಳಗಿರಬೇಕು.

ಸ್ಥಳೀಯತೆ: ಕೇವಲ ಧಾರವಾಡ ಜಿಲ್ಲೆಯ ಅರ್ಹ ವ್ಯಕ್ತಿಗಳಿಗೆ ಮಾತ್ರ ಈ ಅವಕಾಶ.

ಜಾತಿ: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ಧಾರವಾಡದ ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿಯನ್ನು ಪಡೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ (Two Copies) ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 13, 2026.

ಸಲ್ಲಿಸಬೇಕಾದ ಸ್ಥಳ: ಪ್ರವಾಸೋದ್ಯಮ ಇಲಾಖೆಯ ಕಛೇರಿ, ಧಾರವಾಡ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

0836-2744522

0836-2955522

[t4b-ticker]
error: Content is protected !!