ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ: 24×7 ಸಹಾಯವಾಣಿ ಆರಂಭ!

Picture of Savistara

Savistara

Bureau Report

ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿನ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಆ ದೇಶಗಳ ವಾಯುಪ್ರದೇಶವನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಕರ್ನಾಟಕದ ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿದೆ.ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಸೂಚನೆಯಂತೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ಜಿಲ್ಲಾ ಮಟ್ಟದ ಕೇಂದ್ರಗಳು (DEOC) 24×7 ಕಾರ್ಯನಿರ್ವಹಿಸುತ್ತಿವೆ.ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕನ್ನಡಿಗರ ಸುರಕ್ಷಿತ ವಾಪಸಾತಿಗಾಗಿ ಶ್ರಮಿಸುತ್ತಿದ್ದಾರೆ.ಸಂಕಷ್ಟದಲ್ಲಿರುವವರು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು:ಪರಿಸ್ಥಿತಿಯು ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವುದರಿಂದ, ಪ್ರವಾಸಿಗರು ಮತ್ತು ಅಲ್ಲಿನ ನಿವಾಸಿಗಳು ರಾಯಭಾರ ಕಚೇರಿಯ ಸಲಹೆಗಳನ್ನು ಪಾಲಿಸಬೇಕು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ FRRO ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

[t4b-ticker]
error: Content is protected !!