ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕುಟುಂಬ ಸಮೇತರಾಗಿ ಇಂದು ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರು, ವಾಸುದೇವ ಶೆಟ್ಟಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಶರತ್ ಶೆಟ್ಟಿ ಸ್ಥಳೀಯ ಮುಖಂಡರು, ಭಕ್ತಾದಿಗಳು ಉಪಸ್ಥಿತರಿದ್ದರು.













































