ಹನುಮಗಿರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಭೇಟಿ

Picture of Savistara

Savistara

Bureau Report

ಪುತ್ತೂರು : ಎ.9ರಿಂದ 12ರವರೆಗೆ ನಡೆಯುತ್ತಿರುವ ಹನುಮಗಿರಿ ಶ್ರೀಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಎ.10ರಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹೊಟ್‌ರವರು ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಅವರು ಬೆಳಿಗ್ಗೆ ಆಂಜನೇಯನ ಸನ್ನಿಧಿಯ ನೂತನ ಗೋಪುರ, ಮುಖಮಂಟಪ, ಉದ್ಯಾನವನವನ್ನು ಲೋಕಾರ್ಪಣೆ ಮಾಡಿದರು. ಬೆಳಿಗ್ಗೆ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹಾಗೂ ಮಧ್ಯಾಹ್ನ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಯವರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಇನ್ನೀತರ ಪ್ರಮುಖರು ಉಪಸ್ಥಿತರಿದ್ದರು.

[t4b-ticker]
error: Content is protected !!