ಮಂಗಳೂರು : ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಇದರ ಅಧ್ಯಕ್ಷರಾಗಿ ಕಿರಣ್ ಬುಡ್ಡೆಗುತ್ತು ಆಯ್ಕೆ

Picture of Savistara

Savistara

Bureau Report

ದ.ಕ. ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ 48 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಬುಡ್ಡೆಗುತ್ತು ಆಯ್ಕೆಯಾಗಿದ್ದಾರೆ.

ನಿನ್ನೆ ಮಂಗಳೂರಿನಲ್ಲಿ ನಡೆದ ಸಂಘದ ನೂತನ ನಿರ್ದೇಶಕರ ಸಭೆಯಲ್ಲಿ ಕಿರಣ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಕಾರ್ಯದರ್ಶಿಯಾಗಿ ನವೀನ್ ಚಂದ್ರ ಭೋಜಾರ, ಉಪಾಧ್ಯಕ್ಷರಾಗಿ ಆನಂದ ಪಿ.ಎಚ್., ಕೋಶಾಧಿಕಾರಿಯಾಗಿ ಶ್ರೀಮತಿ ಜಯಶ್ರೀ ಪರ್ಲ, ಜತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕರಂಗಲ್ಲು ಆಯ್ಕೆಯಾಗಿದ್ದಾರೆ.

[t4b-ticker]
error: Content is protected !!