ತಿರುವನಂತಪುರಂ: ಕೇರಳದ ತ್ರಿಶೂರ್ನಲ್ಲಿರುವ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ ಸುಮಾರು 3.30ಕ್ಕೆ ಈ ಘಟನೆ ಸಂಭವಿಸಿದ್ದು, ದೀರ್ಘ ಕಾಲದವರೆಗೆ ಸ್ಪೋಟ ಸಂಭವಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು ಎಂದು ಅವರು ಹೇಳಿದ್ದಾರೆ.
ಸುಮಾರು 40 ಕಾರ್ಮಿಕರು ಈ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೆಲ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸ್ಫೋಟದ ತೀವ್ರತೆಗೆ ಹತ್ತಿರದ ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ.ಮುಂಬರುವ ‘ತ್ರಿಶೂರ್ ಪೂರಂ’ ಹಬ್ಬಕ್ಕಾಗಿ ಈ ಘಟಕದಲ್ಲಿ ಪಟಾಕಿ ತಯಾರಿಕೆ ಭರದಿಂದ ಸಾಗುತ್ತಿತ್ತು. ಇದೇ ವೇಳೆ ಅವಘಡ ಸಂಭವಿಸಿದೆ.












































