ಎಪ್ರಿಲ್ 23-24 ರಂದು ಸಿಇಟಿಪರೀಕ್ಷೆ : ಇದೇ ಮೊದಲ ಬಾರಿಗೆ ಡ್ರೆಸ್ ಕೋಡ್ ಅಧಿಕಾರಿಗಳ ನೇಮಕ, 3.3 ಲಕ್ಷ ಅಭ್ಯರ್ಥಿಗಳು ನೋಂದಣಿ

Picture of Savistara

Savistara

Bureau Report

ಬೆಂಗಳೂರು, ಎಪ್ರಿಲ್ 22, 2026 (ಕರಾವಳಿ ಟೈಮ್ಸ್) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ಎಪ್ರಿಲ್ 23 ಗುರುವಾರ ಹಾಗೂ 24 ಶುಕ್ರವಾರ ನಡೆಯಲಿದೆ. 1,44,380 ವಿದ್ಯಾರ್ಥಿಗಳು ಮತ್ತು 1,86,099 ವಿದ್ಯಾರ್ಥಿನಿಯರ ಸಹಿತ ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.ಇದೇ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರ ಸಂಹಿತೆ ಪಾಲನೆ ನೋಡಿಕೊಳ್ಳಲು ಡ್ರೆಸ್ ಕೋಡ್ ಅಧಿಕಾರಿ ನೇಮಕ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟು 745 ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಅರ್ಧ ತೋಳು ಉಡುಪು ಧರಿಸಬೇಕು ಮತ್ತು ಕಾಲರ್ ಇಲ್ಲದ ಬಟ್ಟೆಗಳನ್ನು ಧರಿಸುವುದು ಉತ್ತಮ ಎಂದು ಡ್ರೆಸ್‌ ಕೋಡ್ ಸೂಚಿಸಿದೆ. ಗಂಡು ಮಕ್ಕಳು ಜೇಬಿಲ್ಲದ ಸರಳ ಪ್ಯಾಂಟ್ ಧರಿಸಲು ಅನುಮತಿ ಇದೆ. ಕುರ್ಥಾ-ಪೈಜಾಮಾ, ಜೀನ್ಸ್ ಹಾಗೂ ಶೂಗಳನ್ನು ನಿಷೇಧಿಸಲಾಗಿದೆ.

ಮೊಬೈಲ್ ಫೆC ೀನ್ ಗಳು, ಬ್ಲೂಟೂತ್ ಸಾಧನಗಳು, ಇಯ‌ರ್ ಫೆÇಕ್ಲೀನ್ ಗಳು, ಮೈಕ್ರೋ ಫೆÇ ೀನ್ ಗಳು ಮತ್ತು ಎಲ್ಲಾ ವಿಧದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಬರುವ ಮೊದಲು ಕೆಇಎ ವೆಬ್ ಸೈಟಿನಲ್ಲಿ ನೀಡಲಾಗಿರುವ ಡ್ರೆಸ್ ಕೋಡ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಕೆಇಎ ತಿಳಿಸಿದೆ.ಇಂಜಿನಿಯರಿಂಗ್‌, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ವಿಜ್ಞಾನಗಳಂತಹ ವೃತ್ತಿಪರ ಕೋಸ್‌ರ್ಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗಡಿಭಾಗ ಮತ್ತು ಇತರ ರಾಜ್ಯಗಳ ಅಭ್ಯರ್ಥಿಗಳು ಎಪ್ರಿಲ್ 22ರಂದು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ಸೇರಿದಂತೆ ಐದು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ಬರೆಯಲಿದ್ದಾರೆ. ಎಪ್ರಿಲ್ 23 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಎಪ್ರಿಲ್ 24 ರಂದು ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ಹಾಲ್‌ಗಳಲ್ಲಿ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನೇಮಕಾತಿ ಪರೀಕ್ಷೆಗಳಂತೆ ಸಿಸಿಟಿವಿ ಕ್ಯಾಮೆರಾ ನಿಗಾ ಇರಲಿದೆ. ಎಲ್ಲಾ 745 ಕೇಂದ್ರಗಳನ್ನು ವೆಬ್ ಕಾಸ್ಟಿಂಗ್ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ವ್ಯವಸ್ಥೆಗಳನ್ನು ನೋಡಿಕೊಳ್ಳಲಿದ್ದಾರೆ.ಬೆಂಗಳೂರಲ್ಲಿ 163 ಕೇಂದ್ರಗಳಲ್ಲಿ 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಯಲ್ಲಿ ಕೇಂದ್ರ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಕಠಿಣ ತಪಾಸಣೆ ಪ್ರಕ್ರಿಯೆ ಇರುವುದರಿಂದ ಅಭ್ಯರ್ಥಿಗಳು ಕನಿಷ್ಠ ಎರಡು ಗಂಟೆಗಳ ಮುಂಚಿತವಾಗಿ ಕೇಂದ್ರಕ್ಕೆ ಆಗಮಿಸಬೇಕು. ಒಟ್ಟು 970 ದಿವ್ಯಾಂಗ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಶ್ರವಣ ಸಾಧನ ಬಳಸುವವರು ಹೆಚ್ಚುವರಿ ಪರಿಶೀಲನೆಗಾಗಿ ಎರಡು ಗಂಟೆಗಳ ಮುಂಚಿತವಾಗಿ ಹಾಜರಾಗಬೇಕು. ಸಂವೇದನಾಶೀಲ ಕೇಂದ್ರಗಳಲ್ಲಿ ಮೊಬೈಲ್ ಸಿಗ್ನಲ್‌ ಜಾಮರ್ ಗಳನ್ನು ಅಳವಡಿಸಲಾಗಿದೆ.

ಅಭ್ಯರ್ಥಿಗಳ ಬದಲು ಇತರರು ಪರೀಕ್ಷೆ ಬರೆಯುವುದನ್ನು ತಡೆಯಲು ಮುಖ ಗುರುತು (ಫೇಶಿಯಲ್ ರೆಕಗ್ನಿಶನ್) ಮತ್ತು ಕ್ಯೂಆರ್ ಕೋಡ್ ಪರಿಶೀಲನಾ ವ್ಯವಸ್ಥೆಯನ್ನು ಕೆಇಎ ಅಳವಡಿಸಿದೆ. ಇದೇ ವ್ಯವಸ್ಥೆಯನ್ನು ಕಾಲೇಜು ಪ್ರವೇಶ ಸಮಯದಲ್ಲೂ ಬಳಸಲಾಗುತ್ತದೆ.ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಕಡಿಮೆ ಅಂಕ ಪಡೆದವರು ಅಥವಾ ಅನುತ್ತೀರ್ಣರಾದವರಿಗೆ ಇನ್ನೂ ಅವಕಾಶ ಇದ್ದು, ಎರಡನೇ ಪರೀಕ್ಷೆಯ ಅಂಕಗಳನ್ನು ಸಿಇಟಿ ಫಲಿತಾಂಶದಲ್ಲಿ ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು ಒಎಂಆ‌ರ್ ಶೀಟನ್ನು ಜಾಗ್ರತೆಯಿಂದ ತುಂಬಬೇಕು. ತಮ್ಮ ಸಿಇಟಿ ನೋಂದಣಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ಆವೃತ್ತಿ ಕೋಡ್ ಹಾಗೂ ಸರಣಿ ಸಂಖ್ಯೆಯನ್ನು ಸರಿಯಾಗಿ ದಾಖಲಿಸಬೇಕು. ಈ ವಿವರಗಳಲ್ಲಿ ತಪ್ಪುಗಳು ಹಿಂದೆಯೂ ಫಲಿತಾಂಶದ ಸಮಸ್ಯೆಗಳಿಗೆ ಕಾರಣವಾಗಿವೆ, ಆದ್ದರಿಂದ ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ.

[t4b-ticker]
error: Content is protected !!