ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಐದು ದಶಕಗಳ ರಾಜಕೀಯ ಪಯಣದ ಸಂಭ್ರಮಾಚರಣೆಯು ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಲೋಗೋವನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಶಾಸಕರಾದ ಶ್ರೀ ಹರೀಶ್ ಪೂಂಜ, ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಶ್ರೀ ವೈ. ಎ. ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೇರಿ, ಮಾಜಿ ಪರಿಷತ್ ಸದಸ್ಯರಾದ ಶ್ರೀ ಅರುಣ್ ಶಹಾಪುರ ಉಪಸ್ಥಿತರಿದ್ದರು.











































