ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ.ಅಜಿತ್ ಕುಮಾ‌ರ್ ರೈ ಮಾಲಾಡಿ ಪುನರಾಯ್ಕೆ

Picture of Savistara

Savistara

Bureau Report

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡುಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ. ಅಜಿತ್ ಕುಮಾರ್ ರೈ ಹೇಳಿದರು.

ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪಚುನಾವಣಾಧಿಕಾರಿ, ವಕೀಲ ನವೀನ್ ಶೆಟ್ಟಿ, ಚುನಾವಣಾಧಿಕಾರಿ ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!