ದಾವಣಗೆರೆ : ಬಿಎಸ್ ವೈ ಅಭಿಮಾನೋತ್ಸವ ನಿಮಿತ್ತ ಪೂರ್ವಭಾವಿ ಸಭೆ

Picture of Savistara

Savistara

Bureau Report

ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ “ಅಭಿಮಾನೋತ್ಸವ” ಕಾರ್ಯಕ್ರಮದ ಯಶಸ್ಸಿನ ನಿಮಿತ್ತ ಇಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

ಜನಸಾಮಾನ್ಯರ ಮತ್ತು ರೈತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಯಡಿಯೂರಪ್ಪನವರ ಅಭಿಮಾನಿಗಳು ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಕುರಿತು ಮತ್ತು ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಈ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಚಿತ್ರದುರ್ಗದ ಈ ಅಭಿಮಾನೋತ್ಸವವು ಕೇವಲ ಒಂದು ಸಮಾರಂಭವಲ್ಲ, ಇದು ನಮ್ಮ ನಾಯಕರಿಗೆ ಸಲ್ಲಿಸುವ ಗೌರವದ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಮತ್ತು ಅಭಿಮಾನಿಗಳು ಒಗ್ಗಟ್ಟಾಗಿ ಕೆಲಸ ನಿರ್ವಹಿಸುವ ಮೂಲಕ ಈ ಸಮಾವೇಶವನ್ನು ಐತಿಹಾಸಿಕವಾಗಿಸಲು ನಿರ್ಧರಿಸಲಾಯಿತು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!