ಕೇರಳ ಚುನಾವಣಾ ಫಲಿತಾಂಶ: ಶತಕದತ್ತ ಯುಡಿಎಫ್​ ಓಟ; ಕಾಂಗ್ರೆಸ್​ ಕಚೇರಿಯಲ್ಲಿ ಸಂಭ್ರಮಾಚರಣೆ!

Picture of Savistara

Savistara

Bureau Report

ಕೇರಳ: ಇಂದು (ಮೇ.4) ಭಾರತದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಕೇರಳದ 140 ವಿಧಾನಸಭಾ ಕ್ಷೇತ್ರಗಳ (Kerala Election Results) ಭವಿಷ್ಯ ಇವತ್ತೇ ಹೊರಬೀಳಲಿದೆ.

ಯುಡಿಎಫ್​ ಶತಕದತ್ತ ಓಟ!ಈ ಭಾರಿಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್​ ಹಾಗೂ ಯುಡಿಎಫ್​ ಮೈತ್ರಿಕೂಟ ಮತ ಎಣಿಕೆಯಲ್ಲಿ 99 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸುವತ್ತ ಮುನ್ನುಗುತ್ತಿದೆ.

ಕಾಂಗ್ರೆಸ್​ ಕಚೇರಿಯಲ್ಲಿ ಸಂಭ್ರಮಾಚರಣೆ!ಇತ್ತ ಜನಾದೇಶ ಸ್ಪಷ್ಟವಾಗುತ್ತಿದ್ದಂತೆ ಕೇರಳದ ಕಾಂಗ್ರೆಸ್​ ಕಚೇರಿಯಲ್ಲಿ ಸಂಭ್ರಾಮಾಚರಣೆ ಪ್ರಾರಂಭವಾಗಿದೆ. ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕರಾದ, ಕೆ.ಸಿ. ವೇಣುಗೋಪಾಲ್, ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್ ಮತ್ತು ಶಶಿ ತರೂರ್ ಮೊದಲಾದವರು ಕಾರ್ಯಕರ್ತರೊಂದಿಗೆ ಸಂತೋಷವನ್ನು ಹಂಚಿಕೊಂಡಿದ್ದಾರೆ.

ನಿರೀಕ್ಷೆಗೆ ಮೀರಿದ ಸಾಧನೆ: ಶಶಿ ತರೂರ್​

ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಪ್ರತಿಕ್ರಿಯೆ ನೀಡಿರುವ ಕೇರಳ ಲೋಕಸಭಾ ಸಂಸದ ಶಶಿ ತರೂರ್, ಈ ಭಾರಿ ಕೇರಳದ ಜನ ಬದಲಾವಣೆಯನ್ನು ಬಯಸಿದ್ದರು, ನಾವು ಮತ್ತು ಯುಡಿಎಫ್​ ತುಂಬಾ ಪ್ರಯತ್ನ ಪಟ್ಟಿದ್ದೆವು. ಆದರೆ ಇದು ನಿರೀಕ್ಷಗೆ ಮೀರಿದ ಹಾಗೆ ಸಂಖ್ಯೆಗಳು ಕಾಣಿಸುತ್ತಿವೆ, ನನಗೆ ವೈಯಕ್ತಿಕವಾಗಿ ಸಂತಸವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಭಾರಿ 140 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಯುಡಿಎಫ್​ 99 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ವಿಜಯನ್​ ನೇತೃತ್ವದ ಎಲ್​ಡಿಎಫ್​ 39 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎನ್​ಡಿಎ ಹಾಗೂ ಇತರೆ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆಲ್ಲುವ ಪಕ್ಷ ಸರ್ಕಾರ ರಚಿಸಲಿದ್ದು, ಯುಡಿಎಫ್​ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಹಿನ್ನಲೆ ಗೆಲುವು ಬಹುತೇಕ ಖಚಿತವಾಗಿದೆ,

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!