ಪಂಚ ರಾಜ್ಯ ಚುನಾವಣೆ ಬಿಜೆಪಿ ಜಯಭೇರಿ | ಶಿವಮೊಗ್ಗದಲ್ಲಿ ಸಂಸದ ಬಿವೈ ರಾಘವೇಂದ್ರ ನೇತೃತ್ವದಲ್ಲಿ ವಿಜಯೋತ್ಸವ

Picture of Savistara

Savistara

Bureau Report

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಅಭೂತಪೂರ್ವ ಯಶಸ್ಸನ್ನು ಸಾಧಿಸಿರುವ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ಸಂಭ್ರಮಾಚರಣೆಯಲ್ಲಿ ಸಂಸದ ರಾಘವೇಂದ್ರ ಬಿ ವೈ ಪಾಲ್ಗೊಂಡರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವ ಮತ್ತು ಅಭಿವೃದ್ಧಿ ಮಂತ್ರಕ್ಕೆ ಜನರು ನೀಡಿರುವ ಈ ಭರ್ಜರಿ ಬೆಂಬಲವು ಪ್ರಜಾಪ್ರಭುತ್ವದ ವಿಜಯವಾಗಿದೆ. ಎಂದು ಸಂಸದ ರಾಘವೇಂದ್ರ ಬಿವೈ ಹೇಳಿದರು.

ಈ ವಿಜಯೋತ್ಸವದಲ್ಲಿ ಜಿಲ್ಲೆಯ ಮುಖಂಡರು ಹಾಗೂ ನೂರಾರು ಉತ್ಸಾಹಿ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಜಯಘೋಷಗಳೊಂದಿಗೆ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.

ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದು ಅವರು ಹೇಳಿದರು.

ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

[t4b-ticker]
error: Content is protected !!