ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಪ್ರಮಾಣ

Picture of Savistara

Savistara

Bureau Report

ಬೆಂಗಳೂರು: ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್.ಜೀವರಾಜ್ ಅವರು ಶಾಸಕರಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಮಾಣವಚನ ಬೋಧಿಸಿದರು.ಈ ಮೊದಲು ಪ್ರಮಾಣ ಬೋಧಿಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ, ಪ್ರಮಾಣ ವಚನ ಬೋಧಿಸುವಂತೆ ರಾಜ್ಯಪಾಲರನ್ನೇ ಕೋರಿದ್ದೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ ಹೇಳಿದ್ದರು.

ಸಭಾಧ್ಯಕ್ಷರು ಸಂವಿಧಾನದ ಪ್ರಕಾರ ಪ್ರಮಾಣ ವಚನ ಪ್ರಕ್ರಿಯೆ ನಡೆಸದೇ ಇದ್ದರೆ, ಅವರ ವಿರುದ್ಧ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

[t4b-ticker]
error: Content is protected !!