ಮೋದಿಯವರ ಮಿತವ್ಯಯದ ಸಲಹೆ ಸ್ವೀಕಾರಾರ್ಹ: ಟಿ. ಬಿ. ಜಯಚಂದ್ರ

Picture of Savistara

Savistara

Bureau Report

ತುಮಕೂರು ಗ್ರಾಮಾಂತರ, ಮೇ 15: ಪ್ರಧಾನಿ ನರೇಂದ್ರ ಮೋದಿ ಅವರ ಮಿತ ಬಳಕೆಯ ಸಲಹೆಯನ್ನು ವಿಪಕ್ಷದ ನಾಯಕರು ವಿರೋಧಿಸುತ್ತಿರುವ ನಡುವೆಯೇ ರಾಜ್ಯ ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ, ಕಾಂಗ್ರೆಸ್ ಶಾಸಕ ಟಿ. ಬಿ. ಜಯಚಂದ್ರ ಬೆಂಬಲ ವ್ಯಕ್ತಪಡಿಸಿ, ಮಿತವ್ಯಯದ ಮೋದಿಯವರ ಸಂದೇಶ ಸ್ವೀಕಾರಾರ್ಹ ಎಂದು ಹೇಳಿದ್ದಾರೆ.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯುದ್ಧದ ಪರಿಸ್ಥಿತಿಯ ಪರಿಣಾಮವಾಗಿ ಜಾಗತಿಕ ಆರ್ಥಿಕತೆ ಮೇಲೆ ಒತ್ತಡ ಹೆಚ್ಚಾಗಿದ್ದು, ಅದರ ದುಷ್ಪರಿಣಾಮವಾಗಿ ಬೆಲೆ ಏರಿಕೆ ಕಂಡುಬರುತ್ತಿದೆ.

ಹಾಗಾಗಿ ಇಂತಹ ಸಂಕಷ್ಟದ ಸಂದರ್ಭಗಳಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯಿಂದ ವರ್ತಿಸಬೇಕು. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಾಗುತ್ತದೆ. ಡಾಲರ್‌ಮೌಲ್ಯದಲ್ಲಿ ಹಣ ನೀಡಿ ಖರೀದಿಸಬೇಕಾದ ಪರಿಸ್ಥಿತಿಯಿರುವುದರಿಂದ, ಇಂಧನ ಬಳಕೆಯನ್ನು ಮಿತವಾಗಿ ಬಳಕೆ ಮಾಡುವುದು ಅಗತ್ಯ ಎಂದು ಹೇಳಿದ್ದಾರೆ.’ಮಿತ ಬಳಕೆಯ ಸಂದೇಶ ನೀಡಿ, ಕೇಂದ್ರ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದೆ. ಅದು ವಾಸ್ತವಾಧಾರಿತ ವಿಚಾರ’ ಎಂದಿದ್ದಾರೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!