ತುಮಕೂರು: ಸಾಧನಾ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Picture of Savistara

Savistara

Bureau Report

ತುಮಕೂರು: ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು.

ನಗರದ ಜೂನಿಯ‌ರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆ ಒಳಗೊಂಡಂತೆ ವಿವಿಧ ಜಿಲ್ಲೆಗಳ ಫಲಾನುಭವಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. 1.52 ಲಕ್ಷ ಜನರಿಗೆ ಹಕ್ಕುಪತ್ರ, ಪೌತಿ ಖಾತೆ ಇತರೆ ಕಂದಾಯ ದಾಖಲೆ ವಿತರಿಸಲಾಗುತ್ತಿದೆ.ಸಚಿವರಾದ ಜಿ.ಪರಮೇಶ್ವರ, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಎಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್, ಲಕ್ಷ್ಮಿ ಹೆಬ್ಬಾಳಕರ, ಡಾ.ಎಂ.ಸಿ.ಸುಧಾಕ‌ರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್ ಮೊದಲಾದವರು ಪಾಲ್ಗೊಂಡಿದ್ದಾರೆ.

[t4b-ticker]
error: Content is protected !!