ಕೇರಳ ಸ್ಪೀಕ‌ರ್ ಎಲೆಕ್ಷನ್: ಬಿಜೆಪಿಯಿಂದ ಇದೇ ಮೊದಲ ಬಾರಿ ಸ್ಪರ್ಧೆ

Picture of Savistara

Savistara

Bureau Report

ತಿರುವನಂತಪುರ: ಕೇರಳ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ 3 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಸ್ಪೀಕರ್‌ ಸ್ಥಾನಕ್ಕೆ ಶುಕ್ರವಾರ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಕೊಲ್ಲಂ ಜಿಲ್ಲೆಯ ಚತ್ತನೂರ್‌ ಕ್ಷೇತ್ರದಿಂದ ಗೆದ್ದಿದ್ದ ಬಿ.ಬಿ.ಗೋಪಕುಮಾರ್‌ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ ಎಂದು ರಾಜ್ಯಾಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ತಿರುವಂಚೂರ್‌ ರಾಧಾಕೃಷ್ಣ ಅವರನ್ನು ಈಗಾಗಲೇ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಎಲ್‌ಡಿಎಫ್‌ ಯಾವುದೇ ಅಭ್ಯರ್ಥಿ ಯನ್ನು ಈವರೆಗೆ ಘೋಷಣೆ ಮಾಡಿಲ್ಲ.

[t4b-ticker]
error: Content is protected !!