ಒಳನಾಡಲ್ಲೂ ಮುಂಗಾರು ಚುರುಕು| ದ. ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

Picture of Savistara

Savistara

Bureau Report

ಕರ್ನಾಟಕದಲ್ಲಿ ಪ್ರೀ-ಮಾನ್ಸೂನ್ ವಾತಾವರಣ ತೀವ್ರಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಎಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮುಂದಿನ ಕೆಲವು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!