ದೇವೇಗೌಡರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡಿ ಎಂದು ಯಾರನ್ನೂ ಕೇಳಿಲ್ಲ:ಎಚ್‌.ಡಿ.ಕೆ

Picture of Savistara

Savistara

Bureau Report

ಬೆಂಗಳೂರು: ‘ಎಚ್.ಡಿ.ದೇವೇಗೌಡ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಎಂದು ನಾವು ಯಾರನ್ನೂ ಕೇಳಿಲ್ಲ’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮ ಮಿತ್ರ ಪಕ್ಷ ಬಿಜೆಪಿಗೆ ರಾಜ್ಯ ವಿಧಾನಸಭೆಯಲ್ಲಿ 63 ಸ್ಥಾನಗಳಿವೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ಅದು ಅವರಿಗೆ ಬಿಟ್ಟ ವಿಚಾರ’ ಎಂದರು.’ಈ ವಿಚಾರದಲ್ಲಿ ನಾನಾಗಲೀ, ದೇವೇಗೌಡರಾಗಲಿ ಯಾರೊಂದಿಗೂ ಚರ್ಚಿಸಿಲ್ಲ. ಇನ್ನೊಬ್ಬರ ಅವಕಾಶವನ್ನು ತಪ್ಪಿಸಿ, ನಾವು ಆ ಸ್ಥಾನವನ್ನು ಕಸಿದುಕೊಳ್ಳುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

[t4b-ticker]
error: Content is protected !!