‘ಭಾರತ್‌ ಭಾಗ್ಯ ವಿಧಾತ’ ಚಿತ್ರದಲ್ಲಿ ದಾದಿಯರ ಸಾಹಸ ಅನಾವರಣ: ನಿತಿನ್ ಗಡ್ಕರಿ

Picture of Savistara

Savistara

Bureau Report

ನಾಗುರ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ಕಾಮಾ ಆಸ್ಪತ್ರೆಯ ದಾದಿಯರು ಹೇಗೆ ಪ್ರಾಣದ ಹಂಗು ತೊರೆದು ಜನರ ಜೀವ ಉಳಿಸಿದರು ಎಂಬುವುದನ್ನು ‘ಭಾರತ್‌ ಭಾಗ್ಯ ವಿಧಾತ’ ಸಿನಿಮಾದಲ್ಲಿ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶ್ಲಾಘಿಸಿದ್ದಾರೆ.

ನಾಗಪುರದಲ್ಲಿ ನಡೆದ ಈ ಚಿತ್ರದ ವಿಶೇಷ ಪ್ರದರ್ಶನ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಈ ಸಿನಿಮಾ ನನ್ನ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿತು. ಭಯೋತ್ಪಾದಕರು ದಾಳಿ ಮಾಡಿದಾಗ ನಾನು ಮುಂಬೈನಲ್ಲಿಯೇ ಇದ್ದೆ. ಉಗ್ರರು ವಿಟಿ (CSMT) ರೈಲ್ವೆ ನಿಲ್ದಾಣದ ಮೇಲೆ ದಾಳಿ ಮಾಡಿದ ನಂತರ ಕಾಮಾ ಆಸ್ಪತ್ರೆಗೂ ನುಗ್ಗಿದ್ದರು. ಆ ಸಮಯದಲ್ಲಿ ಅಲ್ಲಿನ ದಾದಿಯರು ತೋರಿದ ಧೈರ್ಯ ಮತ್ತು ಜನರ ಜೀವ ಉಳಿಸಿದ ರೀತಿ ಅತ್ಯಂತ ನೈಜವಾಗಿ ಈ ಚಿತ್ರದಲ್ಲಿ ಮೂಡಿಬಂದಿದೆ ಎಂದಿದ್ದಾರೆ.ಮನೋಜ್ ಕಪ್ಪೆ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದಲ್ಲಿ ನಟಿಸಿರುವ ಬಹುತೇಕ ಕಲಾವಿದರು ಮರಾಠಿ ಮೂಲದವರಾಗಿದ್ದು, ಪ್ರತಿಯೊಬ್ಬರೂ ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!