ನಾಗುರ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ಕಾಮಾ ಆಸ್ಪತ್ರೆಯ ದಾದಿಯರು ಹೇಗೆ ಪ್ರಾಣದ ಹಂಗು ತೊರೆದು ಜನರ ಜೀವ ಉಳಿಸಿದರು ಎಂಬುವುದನ್ನು ‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶ್ಲಾಘಿಸಿದ್ದಾರೆ.
ನಾಗಪುರದಲ್ಲಿ ನಡೆದ ಈ ಚಿತ್ರದ ವಿಶೇಷ ಪ್ರದರ್ಶನ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಈ ಸಿನಿಮಾ ನನ್ನ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿತು. ಭಯೋತ್ಪಾದಕರು ದಾಳಿ ಮಾಡಿದಾಗ ನಾನು ಮುಂಬೈನಲ್ಲಿಯೇ ಇದ್ದೆ. ಉಗ್ರರು ವಿಟಿ (CSMT) ರೈಲ್ವೆ ನಿಲ್ದಾಣದ ಮೇಲೆ ದಾಳಿ ಮಾಡಿದ ನಂತರ ಕಾಮಾ ಆಸ್ಪತ್ರೆಗೂ ನುಗ್ಗಿದ್ದರು. ಆ ಸಮಯದಲ್ಲಿ ಅಲ್ಲಿನ ದಾದಿಯರು ತೋರಿದ ಧೈರ್ಯ ಮತ್ತು ಜನರ ಜೀವ ಉಳಿಸಿದ ರೀತಿ ಅತ್ಯಂತ ನೈಜವಾಗಿ ಈ ಚಿತ್ರದಲ್ಲಿ ಮೂಡಿಬಂದಿದೆ ಎಂದಿದ್ದಾರೆ.ಮನೋಜ್ ಕಪ್ಪೆ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದಲ್ಲಿ ನಟಿಸಿರುವ ಬಹುತೇಕ ಕಲಾವಿದರು ಮರಾಠಿ ಮೂಲದವರಾಗಿದ್ದು, ಪ್ರತಿಯೊಬ್ಬರೂ ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.











































