ಪುತ್ತೂರು: ಮೈಸೂರಿನಲ್ಲಿ ನಡೆಯುವ ದಸರಾಗೆ ಈ ಬಾರಿ ಕಂಬಳ ನಡೆಸುವ ನಿಟ್ಟಿನಲ್ಲಿ ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ರೈ ಅವರಿಗೆ ಸಿಎಂ ಡಿಕೆಶಿ ಸೂಚನೆ ನೀಡಿದ್ದಾರೆ.ಮೈಸೂರಿನ ಜಯಲಕ್ಷ್ಮೀಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ 17 ಎಕ್ರೆ ಜಾಗದಲ್ಲಿ ಅ. 18 ಹಾಗೂ 19ರಂದು ಕಂಬಳ ನಡೆಸಲು ಸಿದ್ಧತೆಗಳು ಆರಂಭಗೊಂಡಿವೆ.
ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು. 2ನೇ ಹಂತದ ಸಭೆ ಜು. 25ರಂದು ಮೈಸೂರಿನಲ್ಲಿ ನಡೆಯಲಿದ್ದು, ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ.











































