ಕೊಪ್ಪಳ: ನೀರಾವರಿಗೆ ಸಂಬಂಧಿಸಿದ ಪ್ರಮುಖ ಕಾರ್ಯಕ್ರಮಕ್ಕೆ ರಾಜ್ಯದ ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾರೆಡ್ಡಿ ಗೈರಾದರು.
ಜೂ. 18ರಂದು ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಹಾಗೂ ಜಲಾಶಯ ಸೇರಿದಂತೆ ವಿವಿಧೆಡೆ ಸಿದ್ದತಾ ಕಾರ್ಯಗಳನ್ನು ಪರಿಶೀಲಿಸಿದ್ದರು. ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಸಚಿವರು ಪಾಲ್ಗೊಂಡಿದ್ದರು. ಆದರೆ ರಾಜ್ಯದ ಸಚಿವರೇ ಗೈರಾಗಿದ್ದು ಚರ್ಚೆಗೆ ಕಾರಣವಾಯಿತು.ಕಾರ್ಯಕ್ರಮಕ್ಕೆ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾರೆಡ್ಡಿ ವೈಯಕ್ತಿಕ ಕಾರಣದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.ಇದನ್ನು ಮುಖ್ಯಮಂತ್ರಿ ಮತ್ತು ಅಗತ್ಯ ಇರುವವರ ಗಮನಕ್ಕೆ ತರಲಾಗಿತ್ತು ಎಂದು ಅವರು ಹೇಳಿದ್ದಾರೆ.










































