ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೂರು ವರ್ಷಗಳ ಇತಿಹಾಸ ಹೊಂದಿರುವ ಸಂಘಟನೆ. ಸಂಘದ ಬಗ್ಗೆ ಪ್ರಶ್ನೆ ಕೇಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘದ ಹಿಂದುತ್ವದ ವಿಚಾರಧಾರೆ, ನೋಂದಣಿ ಹಾಗೂ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ, ಸಂಘದ ಕಾರ್ಯಚಟುವಟಿಕೆಗಳ ಪ್ರಮುಖ ಕೇಂದ್ರವೆಂದು ಪರಿಗಣಿಸಲ್ಪಡುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮೌನ ವಹಿಸಿರುವುದು ಆಶ್ಚರ್ಯಕರ ಎಂದು ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗಳಿಗೆ ಸಂಘವು ಕಾನೂನುಬದ್ಧವಾಗಿ ಉತ್ತರ ನೀಡುವ ಸಾಮರ್ಥ್ಯ ಹೊಂದಿದೆ. ಹಲವು ದಶಕಗಳಿಂದ ಸಂಘದ ಕಾರ್ಯಕರ್ತರ ಪರಿಶ್ರಮ ಮತ್ತು ಹಿಂದುತ್ವದ ವಿಚಾರಧಾರೆಯ ಪರಿಣಾಮವಾಗಿ ಈ ಭಾಗದಲ್ಲಿ ರಾಜಕೀಯ ಯಶಸ್ಸು ಸಾಧ್ಯವಾಗಿದೆ. ಹಾಗಿದ್ದರೂ ಕರಾವಳಿಯ ಜನಪ್ರತಿನಿಧಿಗಳು ಯಾಕೆ ಮೌನವಾಗಿದ್ದಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.










































