ವಿರೋಧಿಸಿ ಹೋರಾಟ: ಭೈರಮಂಗಲಕ್ಕೆ ಆಗಮಿಸಿದ ಕುಮಾರಸ್ವಾಮಿ

Picture of Savistara

Savistara

Bureau Report

ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಭೈರಮಂಗಲ ಗ್ರಾಮಕ್ಕೆ ಆಗಮಿಸಿದ್ದಾರೆ.

ಭೈರಮಂಗಲ ಗ್ರಾಮದ ವೃತ್ತದ ಬಳಿ ಹೆಚ್‌ಡಿಕೆ ನೇತೃತ್ವದಲ್ಲಿ ಯೋಜನೆಯನ್ನು ವಿರೋಧಿಸಿ ಸಭೆ ನಡೆಯುತ್ತಿದೆ. ಇದೇ ವೇಳೆ, ಅಲ್ಲಿಂದ ನೂರು ಮೀಟರ್ ದೂರದಲ್ಲಿ ಯೋಜನೆಯ ಪರ ಇರುವ ರೈತರಿಂದಲೂ ಪ್ರತಿಭಟನೆ ಜರುಗುತ್ತಿದೆ.ಪರ-ವಿರೋಧದ ಬಣಗಳಿಂದ ಪ್ರತ್ಯೇಕ ಪ್ರತಿಭಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ, ಎಸ್.ಪಿ. ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಗ್ರಾಮದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

[t4b-ticker]
error: Content is protected !!