ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.
ಅವರು ಜು. 6ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.












































