ನಾಗರ ಪಂಚಮಿ ರಜೆ ಮನವಿ

Picture of Savistara

Savistara

Bureau Report

ನಾಗರ ಪಂಚಮಿ ಹಬ್ಬದ ಅಂಗವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸ್ಥಳೀಯ ರಜೆ ಘೋಷಿಸುವಂತೆ ಶಾಸಕ ಯಶ್ ಪಾಲ್ ಎ. ಸುವರ್ಣ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ನಾಗಾರಾಧನೆಗೆ ವಿಶೇಷ ಮಹತ್ವವಿದ್ದು, ಆಗಸ್ಟ್ 17ರಂದು ಆಚರಿಸಲಿರುವ ನಾಗರ ಪಂಚಮಿ ಹಬ್ಬದಂದು ಶಾಲೆ-ಕಾಲೇಜುಗಳಿಗೆ ಸ್ಥಳೀಯ ರಜೆ ಘೋಷಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.ಹಬ್ಬದ ದಿನ ಕುಟುಂಬ ಸಮೇತರಾಗಿ ಮೂಲ ನಾಗಬನಕ್ಕೆ ತೆರಳಿ ಪೂಜೆ ಸಲ್ಲಿಸುವ ಸಂಪ್ರದಾಯವಿರುವುದರಿಂದ, ವಿದ್ಯಾರ್ಥಿಗಳಿಗೂ ಈ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ರಜೆ ಘೋಷಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

[t4b-ticker]
error: Content is protected !!