ತಿರುವನಂತಪುರಂ:ಫಿಫಾ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸೋಮವಾರ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಆದರೆ, ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಈ ಕುರಿತು ಅಧಿಕೃತ ಸರ್ಕಾರಿ ಆದೇಶ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಪ್ರತಿಪಕ್ಷಗಳು ಸೇರಿದಂತೆ ವಿವಿಧ ವಲಯಗಳಿಂದ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪಂದ್ಯ ಮಧ್ಯರಾತ್ರಿಯ ಬಳಿಕ ಮುಕ್ತಾಯಗೊಳ್ಳುವುದರಿಂದ ಮರುದಿನ ಬೆಳಗ್ಗೆ ಮಕ್ಕಳು ತರಗತಿಗಳಿಗೆ ಹಾಜರಾಗುವುದು ಕಷ್ಟವಾಗಬಹುದು ಎಂದು ಮಾಜಿ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಈ ಹಿಂದೆ ಹೇಳಿದ್ದರು.ಫಿಫಾ ವಿಶ್ವಕಪ್ ಫೈನಲ್ ಪಂದ್ಯ ರವಿವಾರ ತಡರಾತ್ರಿ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲವಾಗುವಂತೆ ರಜೆ ನೀಡಲಾಗಿದೆ. ಆದರೆ, ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಪ್ರಕಟಿತ ವೇಳಾಪಟ್ಟಿಯಂತೆ ನಡೆಯಲಿವೆ.
ಅರ್ಜೆಂಟೀನಾ-ಸ್ಪೇನ್ ಫೈನಲ್ ಹಣಾಹಣಿ2026ರ ಫಿಫಾ ವಿಶ್ವಕಪ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ ಸ್ಪೇನ್ ವಿರುದ್ಧ ಸೆಣಸಲಿದೆ. ಅತ್ಯಂತ ರೋಚಕ ಹಣಾಹಣಿಯಾಗಿ ನಿರೀಕ್ಷಿಸಲಾಗಿದೆ.ಮಧ್ಯರಾತ್ರಿ 12:30 ಕ್ಕೆ ಪಂದ್ಯ ಆರಂಭವಾಗಲಿದೆ.










































