ನವದೆಹಲಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ₹2186 ಕೋಟಿ ಅನುದಾನ ಬಿಡುಗಡೆ ಮಾಡಿಸಬೇಕೆಂದು ಅವರು ಆಗ್ರಹಿಸಿದರು.ರಾಜ್ಯ ಸರ್ಕಾರ ಎಲ್ಲ ನಿಗದಿತ ಷರತ್ತುಗಳನ್ನು ಪಾಲಿಸಿದ್ದರೂ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-2026ನೇ ಆರ್ಥಿಕ ವರ್ಷಕ್ಕೆ ಗ್ರಾ.ಪಂ.ಗಳಿಗೆ ಹಂಚಿಕೆಯಾಗಿದ್ದ ₹2186.20 ಕೋಟಿ ಬಿಡುಗಡೆಯಾಗಿಲ್ಲ.ತಂತ್ರಾಂಶದ ತೊಡಕನ್ನೇ ಕಾರಣವಾಗಿಟ್ಟುಕೊಂಡು ಅನುದಾನ ತಡೆಹಿಡಿಯಲಾಗಿದೆ ಎಂಬ ಅಂಶವನ್ನು ಕೇಂದ್ರ ಸಚಿವರ ಗಮನಕ್ಕೆ ತಂದರು.ಎಲ್ ನಿನೋ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಕೊರತೆಯಾಗಿದ್ದು, ಗ್ರಾಮೀಣಾಭಿವೃದ್ಧಿಗೆ ತೊಡಕಾಗಿರುವು ದಲ್ಲದೆ, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು.ರಾಜ್ಯ ಸರ್ಕಾರ ಅಗತ್ಯ ಪ್ರಮಾಣಪತ್ರ ಗಳನ್ನು ಒದಗಿಸಿರುವುದಲ್ಲದೆ, ಕೇಂದ್ರ ಪಂಚಾಯತ್ರಾಜ್ ಸಚಿವಾಲಯ ಕೇಳಿದ್ದ ಎಲ್ಲ ಪ್ರಶ್ನೆಗಳಿಗೂ ಪೂರಕವಾಗಿ ಉತ್ತರಿಸಿದೆ. ಆದರೂ ಹಣ ಬಿಡುಗಡೆ ಮಾಡಿಲ್ಲ ಎಂದರು.









































