ಹೊಸದಿಲ್ಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದಂತೆ ಜಂತರ್ ಮಂತರ್ ನಲ್ಲಿ ‘ಜೈ ಕಾಕ್ರೋಚ್’ ಎಂದು ಪ್ರತಿಭಟನಾಕಾರರು ಕುಣಿದಾಡುವ ವಿಡಿಯೋ ವೈರಲ್ ಆಗುತ್ತಿದೆ.ಕಾಕ್ರೋಚ್ ಜನತಾ ಪಾರ್ಟಿ ಅಧಿಕೃತ X ಖಾತೆಯಲ್ಲಿ ಗಾಂಧೀಜಿಯ ಶಾಂತಿಯುತ ಹೋರಾಟದ ಬಗ್ಗೆ ಬರವಣಿಗೆಗಳು ಪ್ರಕಟಗೊಳ್ಳುತ್ತಿವೆ.









































