ಆಂಬುಲೆನ್ಸ್ ನಲ್ಲಿ ಡ್ರಗ್ಸ್ ಪೂರೈಕೆ ಅಡ್ಡೆ ಮಾಡಿಕೊಂಡಿದ್ದ ಆರೋಪಿ: ಜಲೀಲ್‌ ಬಾಬಾ ಕರಾಳ ಮುಖವಾಡ ಬಯಲಾಗಿದ್ದೇಗೆ?

Picture of Savistara

Savistara

Bureau Report

ಮಂಗಳೂರು, ಜುಲೈ 26: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮಾಜ ಸೇವಕ ಹಾಗೂ ಆಪದ್ಭಾಂಧವ ಎಂದೇ ಗುರುತಿಸಿಕೊಂಡಿದ್ದ ಆ್ಯಂಬುಲೆನ್ಸ್ ಚಾಲಕ ಜಲೀಲ್‌ ಆಲಿಯಾಸ್ ಜಲೀಲ್ ಬಾಬಾ ಎಂಬಾತನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಸಮಾಜ ಸೇವೆಯ ನೆಪದಲ್ಲಿ ಈತ ಆ್ಯಂಬುಲೆನ್ಸ್ ಬಳಸಿ ಭಾರೀ ಪ್ರಮಾಣದ ಡ್ರಗ್ಸ್ (drug) ಪೂರೈಕೆ ಮಾಡುತ್ತಿದ್ದ ಸ್ಪೋಟಕ ಸಂಗತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಆಪದ್ಭಾಂಧವನ ಮತ್ತೊಂದು ಮುಖವಾಡ ಬಯಲು ಜಲೀಲ್ ಅಲಿಯಾಸ್ ಜಲೀಲ್ ಬಾಬಾ ಬಹುಶಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಜನರಿಗೆ ಈತನ ಮುಖ ಚಿರಪರಿಚಿತ. ಇಡೀ ತಾಲೂಕಿನಲ್ಲಿ ಎಲ್ಲೇ ಅಪಘಾತವಾಗಲೀ, ಯಾವುದೇ ಅನಾಹುತವಾಗಲೀ ಈ ಜಲೀಲ್ ಬಾಬಾ ಆ ಜಾಗಕ್ಕೆ ತನ್ನ ಆ್ಯಂಬುಲೆನ್ಸ್‌ ಸಮೇತ ಎಂಟ್ರಿ ಕೊಡುತ್ತಿದ್ದ. ಇದೇ ಕಾರಣಕ್ಕೆ ಜನ ಈತನನ್ನ ಆಪದ್ಭಾಂಧವ ಅಂತಾನೇ ಕರೆಯುತ್ತಿದ್ದರು. ಆದರೆ ಸದ್ಯ ಈತನ ಮತ್ತೊಂದು ಮುಖವಾಡ ಬಯಲಾಗಿದೆ. ಸಮಾಜ ಸೇವೆಯ ಹೆಸರಿನಲ್ಲಿ ಈತ ನಡೆಸುತ್ತಿದ್ದ ಭಾರೀ ಡ್ರಗ್ಸ್ ದಂಧೆ ಬಯಲಿಗೆ ಬಂದಿದೆ.

ಆಪದ್ಭಾಂಧವನ ಮತ್ತೊಂದು ಮುಖವಾಡ ಬಯಲು ಜಲೀಲ್ ಅಲಿಯಾಸ್ ಜಲೀಲ್ ಬಾಬಾ ಬಹುಶಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಜನರಿಗೆ ಈತನ ಮುಖ ಚಿರಪರಿಚಿತ. ಇಡೀ ತಾಲೂಕಿನಲ್ಲಿ ಎಲ್ಲೇ ಅಪಘಾತವಾಗಲೀ, ಯಾವುದೇ ಅನಾಹುತವಾಗಲೀ ಈ ಜಲೀಲ್ ಬಾಬಾ ಆ ಜಾಗಕ್ಕೆ ತನ್ನ ಆ್ಯಂಬುಲೆನ್ಸ್ ಸಮೇತ ಎಂಟ್ರಿ ಕೊಡುತ್ತಿದ್ದ. ಇದೇ ಕಾರಣಕ್ಕೆ ಜನ ಈತನನ್ನ ಆಪದ್ಭಾಂಧವ ಅಂತಾನೇ ಕರೆಯುತ್ತಿದ್ದರು. ಆದರೆ ಸದ್ಯ ಈತನ ಮತ್ತೊಂದು ಮುಖವಾಡ ಬಯಲಾಗಿದೆ. ಸಮಾಜ ಸೇವೆಯ ಹೆಸರಿನಲ್ಲಿ ಈತ ನಡೆಸುತ್ತಿದ್ದ ಭಾರೀ ಡ್ರಗ್ಸ್ ದಂಧೆ ಬಯಲಿಗೆ ಬಂದಿದೆ.ಸಮಾಜ ಸೇವೆಯ ಹೆಸರಿನಲ್ಲಿ ಆ್ಯಂಬುಲೆನ್ಸ್ ಓಡಿಸುತ್ತಿದ್ದ ಜಲೀಲ್ ಡ್ರಗ್ಸ್‌ ಪೂರೈಕೆಗೆ ಅದನ್ನೇ ಬಳಸುತ್ತಿದ್ದ ಎಂಬ ಸ್ಫೋಟಕ ಮಾಹಿತಿ ಮಂಗಳೂರು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. 5 ಕೋಟಿ ರೂ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದ ತನಿಖೆ ವೇಳೆ ಬೆಳ್ತಂಗಡಿಯ ಆ್ಯಂಬುಲೆನ್ಸ್ ಚಾಲಕ ಜಲೀಲ್ ಬಾಬಾನ ಪಾತ್ರ ಪತ್ತೆಯಾಗಿದ್ದು, ಆತ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾದೆ.

ಜಲೀಲ್ ಬಾಬಾ ಸಿಕ್ಕಿಬಿದ್ದಿದ್ದು ಹೇಗೆ?

ಅಸಲಿಗೆ ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಆತನ ವಿಚಾರಣೆ ವೇಳೆ ದೆಹಲಿಯಿಂದ ಡ್ರಗ್ಸ್ ಬರುತ್ತಿರುವ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು. ಕಾರ್ಯಾಚರಣೆಯಲ್ಲಿ ಸುಮಾರು 5 ಕೋಟಿ ರೂ ಮೌಲ್ಯದ 5 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಬೆಳ್ತಂಗಡಿ ಮೂಲದ ಮಹಮ್ಮದ್ ಅಲ್ಪಾಜ್ ಹಾಗೂ ಮಹಮ್ಮದ್ ಮುಸ್ತಾಫಾ ಎಂಬುವವರನ್ನು ಬಂಧಿಸಲಾಗಿತ್ತು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!