ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ನೀಡಿರುವ ಮುನ್ಸೂಚನೆ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರು ನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.











































