ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪ |ಶ್ರೀಕೃಷ್ಣ ಜೆ.ರಾವ್ ಪ್ರಕರಣದ ವಿಚಾರಣೆ ಸೆ.11ಕ್ಕೆ ಮುಂದೂಡಿಕೆ | ವಿಚಾರಣೆಗೆ ಮಧ್ಯಂತರ ತಡೆ, ಮಾಸಿಕ ರೂ.75 ಸಾವಿರ ಪಾವತಿ ಆದೇಶ ಮುಂದುವರಿಕೆ

Picture of Savistara

Savistara

Bureau Report

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ವಂಚಿಸಿರುವ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀಕೃಷ್ಣ ಜೆ.ರಾವ್ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆ ಸೆ.11ಕ್ಕೆ ನಿಗದಿಯಾಗಿದೆ. ಪ್ರಕರಣದ ಮುಂದಿನ ವಿಚಾರಣೆಗೆ ಈಗಾಗಲೇ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆ ಮತ್ತು ಆರೋಪಿಯು ಸಂತ್ರಸ್ತೆ ಮತ್ತು ಮಗುವಿನ ಪಾಲನೆಗಾಗಿ ತಿಂಗಳಿಗೆ 75 ಸಾವಿರ ರೂ.ನೀಡುವ ಆದೇಶವನ್ನು ನ್ಯಾಯಪೀಠ ವಿಸ್ತರಿಸಿದೆ.

ನಗರಸಭೆಯ ಮಾಜಿ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರ ಮಗ ಕೃಷ್ಣ ಜೆ.ರಾವ್, ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು ಆ ಬಳಿಕ ಆತ ಮದುವೆಯಾಗಲು ನಿರಾಕರಿಸಿ ವಂಚಿಸಿರುವುದಾಗಿ ಆರೋಪಿಸಲಾಗಿದೆ.ಬಳಿಕದ ಬೆಳವಣಿಗೆಯಲ್ಲಿ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಮಗುವಿಗೆ ವರ್ಷವಾಗಿದೆ.ಈ ಮಧ್ಯೆ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ವಂಚಿಸಿದ್ದ ಆರೋಪದಲ್ಲಿ ಕೃಷ್ಣ ಜೆ.ರಾವ್ ವಿರುದ್ಧ ಕಲಂ 64(2)(ಎಂ) ಮತ್ತು 69 ಬಿಎನ್‌ಎಸ್‌ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣಜೆ.ರಾವ್‌ನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಬಳಿಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಪ್ರಕರಣ ರದ್ದತಿಗೆ ಹೈಕೋರ್ಟ್‌ಗೆ ಅರ್ಜಿ:ಸಂತ್ರಸ್ತ ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ.ರಾವ್ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರ ಮೂಲಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಮುಂದಿನ ವಿಚಾರಣೆಗೆ ಷರತ್ತಿನೊಂದಿಗೆ ಮಧ್ಯಂತರ ತಡೆಯಾ ನೀಡಿ ಏ.24ರಂದು ಆದೇಶಿಸಿತ್ತು.

ತಿಂಗಳಿಗೆ 75 ಸಾವಿರ ರೂ.ನೀಡಲು ಆದೇಶ:ಅರ್ಜಿಯನ್ನು ಆಲಿಸಿದ್ದ ನ್ಯಾಯಪೀಠ, ಒಂದು ವೇಳೆ ಈ ಪ್ರಕರಣವು ಕೇವಲ ಇಬ್ಬರ ನಡುವಿನ ಒಮ್ಮತದ ಸಂಬಂಧವಾಗಿದ್ದು, ಮಗು ಜನಿಸುವ ಹಂತಕ್ಕೆ ತಲುಪದೆ ಇದ್ದಿದ್ದರೆ ಹಾಗೂ ತಾಯಿ-ಮಗು ಸಂಕಷ್ಟಕ್ಕೆ ಸಿಲುಕದೆ ಇದ್ದಿದ್ದರೆ, ಈ ನ್ಯಾಯಾಲಯ ಪ್ರಕರಣದ ಪ್ರಕ್ರಿಯೆಗಳಿಗೆ ಸಂಪೂರ್ಣ ತಡೆಯಾ ನೀಡುತ್ತಿತ್ತು. ಆದರೆ, ಈಗ ಪರಿಸ್ಥಿತಿ ಭಿನ್ನವಾಗಿದೆ.ಸಂತ್ರಸ್ತೆಯ ಪೋಷಕರು ಮಗುವನ್ನು ನೋಡಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ.ಅರ್ಜಿದಾರರ ಕೃತ್ಯಗಳಿಂದಾಗಿ ಸಂತ್ರಸ್ತೆ ಮತ್ತು ಮಗು ಇಂದು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ, ಈ ಪ್ರಕರಣ ಇತ್ಯರ್ಥವಾಗುವವರೆಗೆ ಅರ್ಜಿದಾರ ಆರೋಪಿಯು ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತ್ತು.

ರಾಜಿ ಸಂಧಾನದ ಪ್ರಸ್ತಾವನೆ ಪುರಸ್ಕರಿಸಿದ ಹೈಕೋರ್ಟ್‌:

ಮುಂದಿನ ಹಂತದಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಕುರಿತು ಕೋರ್ಟ್ ಮುಂದೆ ಪ್ರಸ್ತಾಪಿಸಿದ್ದರು.ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ, ಜೂ.19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಕಡ್ಡಾಯವಾಗಿ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ರಾಜಿ ಸಂಧಾನದ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಿತ್ತು.ಸಂತ್ರಸ್ತೆ ಮತ್ತು ಆಕೆಯ ತಾಯಿ ಹಾಗೂ ಆರೋಪಿ ಶ್ರೀಕೃಷ್ಣ ಜೆ.ರಾವ್ ಅವರ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ಮತ್ತು ಚಂದ್ರಶೇಖ‌ರ್ ರಾವ್ ಅವರು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಿದ್ದರು. ಆರೋಪಿ ಶ್ರೀಕೃಷ್ಣ ಜೆ.ರಾವ್ ವೀಡಿಯೋ ಕಾನರೆನ್ಸ್ ಮೂಲಕ ಹಾಜರಾಗಿದ್ದ. ಆರೋಪಿಗೆ ಹಾಜರಾಗಲು ಅವಕಾಶಕ್ಕಾಗಿ ನ್ಯಾಯಪೀಠ ಮಧ್ಯಸ್ಥಿಕೆ ಕೇಂದ್ರದ ಕಾರ್ಯನಿರ್ವಹಣೆ ಮುಂದುವರಿಸಿ ಅವಕಾಶ ನೀಡಿತ್ತು. ಈ ಮಧ್ಯೆ, ಆರೋಪಿಯು ಸಂತ್ರಸ್ತೆ ಮತ್ತು ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿತಿಂಗಳು ನೀಡಬೇಕಾದ ರೂ.75 ಸಾವಿರವನ್ನು ಪ್ರತಿ ತಿಂಗಳ 5ರೊಳಗೆ ಕಡ್ಡಾಯವಾಗಿ ನೀಡಬೇಕು. ಇದರಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು ಎಂದು ನ್ಯಾಯಪೀಠ ಆದೇಶಿಸಿತ್ತು.ಅದರಂತೆ, ಆರೋಪಿ ಕಡೆಯಿಂದ ಸಂತ್ರಸ್ತೆಗೆ ಈಗಾಗಲೇ ಪ್ರತಿ ತಿಂಗಳು ರೂ.75 ಸಾವಿರವನ್ನು ಪಾವತಿಸಲಾಗುತ್ತಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ಮದುವೆಯಾಗಲು ಆರೋಪಿ ನಿರಾಕರಣೆ ರಾಜಿ ಸಂಧಾನದ ಪ್ರಯತ್ನ ವಿಫಲ

ಹೈಕೋರ್ಟ್‌ನ ಆದೇಶದಂತೆ ಪ್ರಕರಣದ ಮಧ್ಯಸ್ಥಿಕೆದಾರರಾಗಿ ನೇಮಕಗೊಂಡಿರುವ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲ ಅವರು ಮಧ್ಯಸ್ಥಿಕೆ ಕೇಂದ್ರದಲ್ಲಿ ಸಂತ್ರಸ್ತೆ ಮತ್ತು ಆರೋಪಿ ಕಡೆಯವರೊಂದಿಗೆ ಮಾತುಕತೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿ ಸ್ಪಷ್ಟವಾಗಿ ನಿರಾಕರಿಸಿದ್ದಾಗಿ ಮೂಲಗಳಿಂದ ತಿಳಿದು ಬಂದಿದೆ.ಇದರಿಂದಾಗಿ ರಾಜಿ ಸಂಧಾನ ಪ್ರಯತ್ನ ವಿಫಲವಾಗಿದೆ. ಈ ಕುರಿತು ನ್ಯಾಯಪೀಠಕ್ಕೆ ವರದಿ ಸಲ್ಲಿಕೆಯಾಗಿದ್ದು ಮುಂದಿನ ವಿಚಾರಣೆ ಸೆ.11ಕ್ಕೆ ಸಂಜೆ ಗಂಟೆ 4.30ಕ್ಕೆ ನಡೆಯಲಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!