ದರ್ಬೆ ವರ್ತಕರ ಮೇಲಿನ ದಾಳಿ ಖಂಡನೆ: ನಾಳೆ ಸ್ವಯಂಪ್ರೇರಿತ ಬಂದ್‌ಗೆ ಬಿಜೆಪಿ ಸಂಪೂರ್ಣ ಬೆಂಬಲ!

Picture of Savistara

Savistara

Bureau Report

ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ಅಮಾನುಷ ದಾಳಿ ಹಾಗೂ ಪೋಲಿಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಗಸ್ಟ್ 25ರಂದು ಕರೆಯ ನೀಡಲಾಗಿರುವ ಸ್ವಯಂಪ್ರೇರಿತ ಬಂದ್‌ಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸಂಪೂರ್ಣ ಬೆಂಬಲ ಘೋಷಿಸಿದೆ.​

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನೀಡಿದ ಪ್ರಕಟಣೆಯ ಮುಖ್ಯ ವಿವರಗಳು ಹೀಗಿವೆ:​

ಬಿಜೆಪಿ ಪತ್ರಿಕಾ ಪ್ರಕಟಣೆ: ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಜಂಟಿ ಪತ್ರಿಕಾ ಪ್ರಕಟಣೆ ಹೊರಡಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

​ಸಹಕಾರಕ್ಕೆ ಮನವಿ: ದರ್ಬೆ ಘಟನೆಯನ್ನು ಖಂಡಿಸಿ ನಡೆಯುತ್ತಿರುವ ಈ ಬಂದ್‌ಗೆ ಸಾರ್ವಜನಿಕರು, ಉದ್ಯಮಿಗಳು ಹಾಗೂ ವರ್ತಕರು ಸಂಪೂರ್ಣವಾಗಿ ಸಹಕರಿಸಬೇಕೆಂದು ಬಿಜೆಪಿ ಮನವಿ ಮಾಡಿದೆ.

[t4b-ticker]
error: Content is protected !!