ಕಸ್ತೂರಿರಂಗನ್ ವರದಿ ಜಾರಿ ವಿರುದ್ಧ ಬಿಜೆಪಿ ಗರಂ: ಶಿವಮೊಗ್ಗದಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಮುಖರ ಮಹತ್ವದ ಸಭೆ!

Picture of Savistara

Savistara

Bureau Report

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ವಿಭಾಗ ಮಟ್ಟದ (ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳು) ಪಕ್ಷದ ಪ್ರಮುಖರ ವಿಶೇಷ ಸಭೆ ನಡೆಯಿತು.

ಈ ಸಭೆಯಲ್ಲಿ ಮಲೆನಾಡು ಭಾಗದಲ್ಲಿ ಕಸ್ತೂರಿರಂಗನ್ ವರದಿ ಕರಡು ಜಾರಿಯಿಂದ ಸ್ಥಳೀಯ ಜನರ ಮೇಲಾಗುವ ಗಂಭೀರ ಪರಿಣಾಮಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.​ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಯುವುದು ಪಕ್ಷದ ಮೊದಲ ಆದ್ಯತೆಯಾಗಿದೆ ಎಂದು ಈ ವೇಳೆ ನಾಯಕರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸಂಸದ ರಾಘವೇಂದ್ರ ಬಿ. ವೈ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಆರಗ ಜ್ಞಾನೇಂದ್ರ, ಸಿ.ಟಿ. ರವಿ, ಆರ್.ಕೆ. ಸಿದ್ಧರಾಮಣ್ಣ ಹಾಗೂ ಕುಮಾರಸ್ವಾಮಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!