ಪಿಎಂ ಕಿಸಾನ್ ಯೋಜನೆಯಡಿ ರೈತರ ಇ-ಕೆವೈಸಿ ಕಡ್ಡಾಯ: ಮುಂದಿನ ಕಂತಿನ ಹಣ ಪಡೆಯಲು ತುರ್ತು ಕ್ರಮ

Picture of Savistara

Savistara

Bureau Report

ಮಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸಹಾಯಧನ ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರವು ಪ್ರಮುಖ ಮಾಹಿತಿಯೊಂದನ್ನು ನೀಡಿದೆ.ಯೋಜನೆಯ ನಿಯಮಾನುಸಾರ, ರೈತರು ಪ್ರತಿ ವರ್ಷ ಕಡ್ಡಾಯವಾಗಿ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಯೋಜನೆಯಡಿ ಅರ್ಹ ರೈತರ ಬ್ಯಾಂಕ್ ಖಾತೆಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ನಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ. ಸಹಾಯಧನ ನೇರವಾಗಿ ಜಮೆ ಆಗುತ್ತದೆ.

ಆದರೆ, ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಪ್ರಕ್ರಿಯೆಯನ್ನು ತಪ್ಪದೆ ಪೂರ್ಣಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.ಇ-ಕೆವೈಸಿ ಪೂರ್ಣಗೊಳಿಸಲು ಎರಡು ಸರಳ ವಿಧಾನಗಳು: ಬಯೋಮೆಟ್ರಿಕ್ ಇ-ಕೆವೈಸಿ: ರೈತರು ತಮ್ಮ ಹತ್ತಿರದ ಗ್ರಾಹಕ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ, ಆಧಾರ್ ಕಾರ್ಡ್ ಅಥವಾ ಆಧಾ‌ರ್ ಸಂಖ್ಯೆಯನ್ನು ಒದಗಿಸಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಮುಖ ಗುರುತಿಸುವಿಕೆ ಇ-ಕೆವೈಸಿ:’ವಿ.ಎನ್.ಒ. ಆಪ್’ (VNO App) ಬಳಸಿ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿಯನ್ನು ಸ್ವತಃ ಮಾಡಿಕೊಳ್ಳಬಹುದು.ಒಂದುವೇಳೆ ಮೊಬೈಲ್ ಆಪ್ ಮೂಲಕ ಇ-ಕೆವೈಸಿ ಮಾಡಲು ತೊಂದರೆಯಾದಲ್ಲಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ನೆರವು ಪಡೆಯಬಹುದು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!