‘ಜನ್ಮಾಷ್ಟಮಿ ಹಾಗೂ ತೆನೆಹಬ್ಬಕ್ಕೆ ಸಾರ್ವತ್ರಿಕ ರಜೆ ಕೊಡಿ!’: ಕರಾವಳಿ ಡಿಸಿ ಅವರಿಗೆ ಶಾಸಕ ವೇದವ್ಯಾಸ ಕಾಮತ್ ಪತ್ರ!

Picture of Savistara

Savistara

Bureau Report

​ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಕ್ರೈಸ್ತ ಸಮುದಾಯದ ಪ್ರಮುಖ ತೆನೆ ಹಬ್ಬಕ್ಕೆ (ಮೋಂತಿ ಫೆಸ್ಟ್) ಸಾರ್ವತ್ರಿಕ ರಜೆ ಘೋಷಿಸುವಂತೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

​ಕರಾವಳಿಯಾದ್ಯಂತ ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅತ್ಯಂತ ವಿಜೃಂಭಣೆಯಿಂದ ಜರುಗಲಿದ್ದು, ಇದು ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ ಸಂಸ್ಕೃತಿ ಮತ್ತು ನೈತಿಕ ಶಿಕ್ಷಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಪರಂಪರೆಯಾಗಿದೆ ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅದೇ ರೀತಿ, ಸೆಪ್ಟೆಂಬರ್ 8 ರಂದು ಕ್ರೈಸ್ತ ಸಮುದಾಯದವರು ಆಚರಿಸುವ ಮರಿಯ ಜಯಂತಿ/ತೆನೆ ಹಬ್ಬಕ್ಕೆ ರಜೆ ನೀಡುವಂತೆ ಸಮುದಾಯದ ಮುಖಂಡರು ಕೋರಿದ್ದಾರೆ.​ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 4 ರಂದು ‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಹಾಗೂ ಸೆಪ್ಟೆಂಬರ್ 8 ರಂದು ‘ತೆನೆ ಹಬ್ಬ’ಕ್ಕೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಬೇಕೆಂದು ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!