ಬೀದರ್: ನಗರದ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಹಾಗೂ ನಿರ್ದೇಶಕರೊಬ್ಬರು ಬುಧವಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಮಾಜಿಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ಅವರ ಮಗ ಅಭಿಷೇಕ ಆರ್. ಪಾಟೀಲ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಮತ್ತು ಉಮೇಶ ಪಾಂಡುರಂಗರಾವ್ ಕುಲಕರ್ಣಿ ಅವರು ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.’ರೈತರ ಹಿತದೃಷ್ಟಿಯಿಂದ ಮತ್ತು ವೈಯಕ್ತಿಕ ಕಾರಣಗಳು, ಅನಿವಾರ್ಯ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ನನಗೆ ವಹಿಸಿದ ಹುದ್ದೆಯ ಜವಾಬ್ದಾರಿ ಮುಂದುವರೆಸಿಕೊಂಡು ಹೋಗಲು ಸಾಧ್ಯವಾಗದ ಕಾರಣ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದೇನೆ. ಅಂಗೀಕರಿಸಿ ಬಿಡುಗಡೆಗೊಳಿಸಬೇಕು’ ಎಂದು ಇಬ್ಬರೂ ರಾಜೀನಾಮೆ ಪತ್ರದಲ್ಲಿ ವಿವರಿಸಿದ್ದಾರೆ.

















































