ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 23 ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಚಾಲನೆ; ಸೆ.13 ರಂದು ಸಂಸದ ಬ್ರಿಜೇಶ್ ಚೌಟರಿಂದ ಗುದ್ದಲಿ ಪೂಜೆ

Picture of Savistara

Savistara

Bureau Report

ಸುಳ್ಯ:ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಸುಳ್ಯ ಮತ್ತು ಕಡಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 23 ನೂತನ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ಸಿಗಲಿದೆ.

ರೂ. 14.95 ಕೋಟಿ ಅನುದಾನ:ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಒಟ್ಟು ರೂ. 14.95 ಕೋಟಿ (1495 ಲಕ್ಷ) ಅನುದಾನದಲ್ಲಿ ಈ ಕಾಮಗಾರಿಗಳು ನಡೆಯಲಿದ್ದು, ಪ್ರತಿ ಕೇಂದ್ರಕ್ಕೆ ತಲಾ ರೂ. 65 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ.

ಸೆ.13 ರಂದು ಗುದ್ದಲಿಪೂಜೆ:*ಈ ಯೋಜನೆಯ ಮೊದಲ ಹಂತವಾಗಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಮತ್ತು ಆಲೆಟ್ಟಿ ಗ್ರಾಮಗಳಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 13-09-2026, ಶನಿವಾರ ಮಧ್ಯಾಹ್ನ 2.00 ಗಂಟೆಗೆ – ಕಂದ್ರಪ್ಪಾಡಿ, ದೇವಚಳ್ಳ, ಸಂಜೆ 4.00 ಗಂಟೆಗೆ – ಆಲೆಟ್ಟಿ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ತರಲು ಶ್ರಮಿಸುತ್ತಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಗುದ್ದಲಿಪೂಜೆ ನೆರವೇರಿಸಲಿದ್ದು, ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಉಪಸ್ಥಿತರಿರಲಿದ್ದಾರೆ.

ಇದೇ ವೇದಿಕೆಯಿಂದ ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ 23 ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!